ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದ ಕಾರಣ ಜಿಲ್ಲೆಯಲ್ಲಿ ಪದವಿ ಪೂರ್ವ ಹಂತದವರೆಗೆ ಶಾಲೆ- ಕಾಲೇಜುಗಳಿಗೆ ಬುಧವಾರ (ಜುಲೈ 26) ರಜೆ ಘೋಷಿಸಲಾಗಿದೆ.
ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು, ಸರ್ಕಾರಿ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಕಾಲೇಜಿಗೆ ಬರಲು ಅನಾನುಕೂಲವಾಗುವ ಸಂದರ್ಭದಲ್ಲಿ ಆನ್ ಲೈನ್ ಮೂಲಕ ತರಗತಿ ನಡೆಸಬಹುದು ಎಂದು ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.
7ನೇ ವೇತನ ಆಯೋಗ ಹಾಗೂ NPS ಜಾರಿಗೆ ವಿಚಾರದಲ್ಲಿ ಷಡಕ್ಷರಿ ಅವರ ಮಹತ್ವದ ಹೇಳಿಕೆ