Wednesday, 6 September 2023

ಈ ಬಾರಿಯೂ ಶಾಲೆಗಳಿಗೆ ದಸರಾ ರಜೆ ಕಡಿತ, ರಜೆ ಕಡಿತಕ್ಕೆ ರಾಜ್ಯಾದ್ಯಂತ ಆಕ್ರೋಶ



ನಾಡು ಮಾಹಿತಿ:-

ಈ ಬಾರಿಯೂ ಕೂಡ ಶಾಲೆಗಳಿಗೆ ದಸರಾ ರಜೆಯನ್ನು ಕಡಿತ ಮಾಡಲಾಗಿದೆ. ರಜೆ ಕಡಿತಕ್ಕೆ ರಾಜ್ಯಾದ್ಯಂತ ಆಕ್ರೋಶ ಮಾಡಲಾಗಿದ್ದು, ಶಾಲಾ ಶಿಕ್ಷಕರಿಗೆ ನಿರಂತರ ಕರ್ತವ್ಯ ಮಾಡುವಂತಾಗಿದೆ.

ರಾಜ್ಯದ ಶಾಲೆಗಳಿಗೆ ಈ ಬಾರಿಯೂ ಕೂಡ ದಸರಾ ರಜೆಯನ್ನು ಕಡಿತ ಮಾಡಲಾಗಿದೆ. ಹೌದು ರಾಜ್ಯ ಸರ್ಕಾರವು ರಾಜ್ಯದ ಶಾಲೆಗಳಿಗೆ ಈ ಬಾರಿಯೂ ದಸರಾ ರಜೆಯನ್ನು ಕಡಿತಗೊಳಿಸಲಾಗಿದ್ದು ಶಾಲಾ ಶಿಕ್ಷಕರಿಂದ ತೀವ್ರ ಆಕ್ಷೇಪ ವ್ಯಕ್ತ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ಅಕ್ಟೋಬರ್ 2 ರಿಂದ ಅಕ್ಟೋಬರ್ 29 ರವರೆಗೆ ದಸರಾ ರಜೆಯನ್ನು ನೀಡಲಾಗುತ್ತಿತ್ತು. ಆದರೆ ಕೊರೋನ ಹಿನ್ನಲೆಯಲ್ಲಿ ಈ ಹಿಂದೆ ರಜೆಯನ್ನು ಕಡಿತುಗೊಳಿಸಲಾಗಿತ್ತು.


ಇನ್ನೂ ರಾಜ್ಯದಲ್ಲಿ ಲಾಕ್ ಡೌನ್ ನಲ್ಲಿ ನಡೆಯದ ತರಗತಿಗಳನ್ನು ಸರಿದೂಗಿಸುವ ನಿಟ್ಟಿನಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿತ್ತು. ಈಗ ಪರಿಸ್ಥಿತಿ ಸಹಜ ಸ್ಥಿತಿಯಲ್ಲಿದ್ದರೂ ಸರ್ಕಾರ ಹಿಂದಿನ ಅದೇ ಕಡಿತದ ನೀತಿ ಅನುಸರಿಸುತ್ತಿದೆ. ಸಾಮಾನ್ಯ ಶಾಲೆಗಳಿಗೆ ಅಕ್ಟೋಬರ್ 8 ರಿಂದ 24ಕ್ಕೆ ಸೀಮಿತಗೊಂಡಿದ್ದು ವಿಶೇಷ ಶಾಲಾ ಮಕ್ಕಳಿಗೆ ದಸರಾ ರಜೆಯನ್ನು ರದ್ದುಗೊಳಿಸಿದೆ. ಈ ಮೂಲಕ ಇಲಾಖೆಯ ವಿವಿಧ ಕರ್ತವ್ಯಕ್ಕೆ ನಿಯೋಜನೆಗೊಳ್ಳುವ ಶಿಕ್ಷಕರಿಗೆ ನಿರಂತರ ಕರ್ತವ್ಯ ಮಾಡುವಂತಹಾಗಿದೆ.

ಇನ್ನು ಸದ್ಯ ಯಾವುದೇ ರೀತಿಯ ಸಮಸ್ಯೆ ಇರದಿದ್ದರೂ ಕೂಡ ಮತ್ತೆ ಶಾಲೆಗಳಿಗೆ ರಜೆಯನ್ನು ಕಡಿತಗೊಳಿಸಿ ಶಾಲಾ ಶಿಕ್ಷಕರು ನಿರಂತರಾಗಿ ಕರ್ತವ್ಯವನ್ನು ಮಾಡುವಂತಾಗಿದ್ದು ರಾಜ್ಯದ ಶಿಕ್ಷಕರ ಅಸಮಾಧಾನಕ್ಕೆ ಕಾರಣವಾಗಿದೆ. ಇತ್ತ ಈ ಒಂದು ವಿಚಾರ ಕುರಿತು ರಾಜ್ಯದ ಶಿಕ್ಷಕರ ಸಂಘಟನೆ ನಾಯಕರು ಏನು ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕು.

1 comment:

  1. Its really painful to kids and teachers and lecturers. Midterm break is essential to revive and refresh for all. Education minister can only solve this.

    ReplyDelete